ಭಟ್ಕಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.29 ರಂದು ಬೆಳಗ್ಗೆ 10.30ಕ್ಕೆ ಸಾಗರ ರಸ್ತೆಯ ಅಯೋಧ್ಯಾ ನಗರದಲ್ಲಿರುವ ನ್ಯೂ ಇಂಗ್ಲಿಷ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಜರುಗಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ. ಗಿರೀಶ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಎಂ.ಆರ್. ಮಾನ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣಕುಮಾರ್ ಶಿರೂರು ರವರು ಪತ್ರಿಕೋದ್ಯಮದ ಕುರಿತು ಉಪನ್ಯಾಸ ನೀಡಿದರು. ಸಂಘದ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಹಾಗೂ ರಾಷ್ಟ್ರೀಯ, ರಾಜ್ಯ ಸಮಿತಿಯ ಮಾಜಿ ಸದಸ್ಯ ರಾಧಾಕೃಷ್ಣ ಭಟ್ಟ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಮೌಲಾನಾ ಎಸ್. ಎಂ. ಜುಬೇರ್ ಭಟ್ಕಳ ಹಾಗೂ ಸಾಮಾಜಿಕ ಹೋರಾಟಗಾರ ರಾಮಾ ಎಂ. ಮೊಗೇರ ಅಳ್ವೆಕೋಡಿ ಅವರನ್ನು ಸನ್ಮಾನಿಸಲಾಯಿತು. ಪತ್ರಿಕಾ ವಿತರಕರಾದ ಫ್ರಾನ್ಸಿಸ್ ಡಿಸೋಜಾ ಮತ್ತು ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ ಸುಜನ್ ಮನಮೋಹನ ನಾಯ್ಕ, ಕರಾಟೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರಣವಿ ರಾಮಚಂದ್ರ ಕಿಣಿ ಅವರನ್ನು ಗೌರವಿಸಲಾಯಿತು.
ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ಬಿಎ ವಿಭಾಗದ ಪತ್ರಿಕೋದ್ಯಮ ವಿಷಯದ ಉಪನ್ಯಾಸಕರಾದ ಶ್ರೀ ಕ್ರಷ್ಣ ಮೊಗೇರ, ಶ್ರೀ ದೇವೇಂದ್ರ ಕಿಣಿ ಹಾಗು ಪತ್ರಿಕೋದ್ಯಮ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.