ಜಿಲ್ಲೆಯ ಶೈಕ್ಷಣಿಕ ಸಂಸ್ಥೆಯಲ್ಲಿ ಸ್ಥಾಪಿಸಲ್ಪಟ್ಟ ಪ್ರಥಮ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರದ ಉದ್ಘಾಟನೆ.
ಭಟ್ಕಳ, ಜೂನ್ 03: "ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿಯಾಗಿದ್ದು ಇವುಗಳು ಮುಂಬರುವ ದಿನಗಳಲ್ಲಿ ವಿಶ್ವವನ್ನೇ ಆಳಲಿವೆ" ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ ಮಂಜುನಾತ ಹೇಳಿದರು. ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನ ಘಟಕವಾದ ರೋಟರಾಕ್ಟ್ ಕ್ಲಬ್ಬಿನ ಹಳೆಯ ವಿದ್ಯಾರ್ಥಿ ಹಾಗೂ ರೋಟರಾಕ್ಟ್ ಕ್ಲಬ್ನ ಮಾಜಿ ಸದಸ್ಯರ ಪ್ರಾಯೋಜಕತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಯಲ್ಲಿ ಸ್ಥಾಪಿಸಲ್ಪಟ್ಟ ಬೋಲ್ಟ ಸಂಸ್ಥೆಯ ಪ್ರಥಮ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು "ಒಪೆಕ್ ಒಕ್ಕೂಟದ ದೇಶಗಳಲ್ಲಿ ಕಚ್ಚಾ ತೈಲದ ಪ್ರಮಾಣವು ದಿನಕಳೆದಂತೆ ಕಡಿಮೆಯಾಗುತ್ತಿದ್ದು ಪರ್ಯಾಯ ಇಂಧನ ಮೂಲಗಳ ಅಭಿವೃದ್ಧಿ ಮತ್ತು ಬಳಕೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಉತ್ತಮ ಕ್ರಮವಾಗಿದೆ" ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜುಕೇಶನ್ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ ರಾಜೇಶ ನಾಯಕ ಮಾತನಾಡಿ ಗ್ರೀನ್ ಕ್ಯಾಂಪಸ ಯೋಜನೆಯ ಅಡಿಯಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಅದರ ಭಾಗವಾಗಿ ಈ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಪ್ರಾಂಶುಪಾಲ ಶ್ರೀನಾಥ್ ಪೈ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕ್ಲಬ್ ಸಂಯೋಜಕ ದೇವೇಂದ್ರ ಕಿಣಿ ರೋಟರಾಕ್ಟ್ ಪ್ರತಿಜ್ಞಾ ವಿಧಿ ಭೋದಿಸಿದರು, ರೋಟರಾಕ್ಟ್ ಅಧ್ಯಕ್ಷ ಪ್ರೇಮಾನಂದ ನಾಯ್ಕ್ ಸ್ವಾಗತಿಸಿದರು, ರೊಟರಾಕ್ಟರ ಪಲ್ಲವಿ ಜೈನ ನಿರೂಪಿಸಿದರು ಮತ್ತು ಕಾರ್ಯದಶರ್ಿ ರಶ್ಮಿ ಮಹಾಲೆ ವಂದಿಸಿದರು. ಈ ಸಂಧರ್ಭದಲ್ಲಿ ಉಪಪ್ರಾಂಶುಪಾಲರಾದ ವಿಶ್ವನಾಥ ಭಟ ಮತ್ತು ಬೋಧಕ - ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment