ಭಟ್ಕಳ ಜುಲೈ 1: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲಾ ಅಂತರ ಪದವಿ ಕಾಲೇಜು ಮಟ್ಟದ ಶೈಕ್ಷಣಿಕ & ಸಾಂಸ್ಕೃತಿಕ ಸ್ಪರ್ಧೆ (ಫೆಸ್ಟ್) ಸೃಷ್ಟಿ 2023 ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಕುಮಟಾದ ಯುವ ಉದ್ಯಮಿ ರಾಮ ಪ್ರಸನ್ನ ಮಾತನಾಡಿ " ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಿಕೆ ಅಗತ್ಯ ಎಂದು ತಿಳಿಸಿದರು" ಅಲ್ಲದೆ ತಮ್ಮ ಸಾಧನೆಗೆ ಕಾರಣವಾದ ವಿಷಯವನ್ನು ನೆನಪಿಸಿಕೊಂಡು ಮಕ್ಕಳಿಗೆ ಪ್ರೇರಣೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಿಳಾ ಉದ್ಯಮಿ ಸುಮಿತ್ರಾ ಕೌಶಿಕ ಮಾತನಾಡಿ "ಸರ್ವ ಕ್ಷೇತ್ರದಲ್ಲಿ ಭಾಗವಹಿಸುವಿಕೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿ, ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣ ಪಡೆದು ಕೌಶಲ್ಯವಂತರಾಗಬೇಕೆಂದು" ಹೇಳಿದರು.
ಹಾಂಗ್ಯೋ ಐಸ್ ಕ್ರಿಮ್ಸ್'ನ ಎಂ.ಡಿ, ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಟ್ರಸ್ಟಿ ಪ್ರದೀಪ ಪೈ ಮಾತನಾಡಿ "ಶ್ರೀ ಗುರು ಸುಧೀಂದ್ರ ಕಾಲೇಜು ಕಳೆದ ಹತ್ತು ವರ್ಷದಲ್ಲಿ ವಿಶ್ವವಿದ್ಯಾಲಯದ ಒಂಬತ್ತು ರ್ಯಾಂಕ್ ಗಳಿಸಿದನ್ನು ಶ್ಲಾಘಿಸಿ, ಶುಭ ಹಾರೈಸಿದರು".
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಅಧ್ಯಕ್ಷರಾದ ಡಾ. ಸುರೇಶ ನಾಯಕ ಮಾತನಾಡಿ "ಇಂತಹ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು" ಎಂದು ಕಿವಿಮಾತು ಹೇಳಿದರು.
ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಟ್ರಸ್ಟಿ ಮ್ಯಾನೇಜರ ರಾಜೇಶ ನಾಯಕ ಕಾರ್ಯಕ್ರಮದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಗುರು ಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ್ ಪೈ ಸ್ವಾಗತಿಸಿದರೆ, ಬಿ.ಕಾಂ ವಿಭಾಗದ ಉಪಪ್ರಾಂಶುಪಾಲ ಪಿ.ಎಸ್ ಹೆಬ್ಬಾರ ವಂದಿಸಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ದೀಪಾ ಹಾಗೂ ನಿಶಾ ನಿರೂಪಿಸಿದರು.
ಈ ಸಂದರ್ಭದಲ್ಲಿ ಆನ್ಲೈನ್ ಮಣಿಪಾಲ್ನ ಆನ್ಲೈನ್ ಎಂ.ಸಿ.ಎ, ಎಂ.ಬಿ.ಎ ಕೋರ್ಸುಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು ಹಾಗೂ ಆನ್ಲೈನ್ ಮಣಿಪಾಲ್ನ ಅಸಿಸ್ಟಂಟ್ ಮ್ಯಾನೇಜರ್ ಸೈಯದ್ ಅಹಮದ್ ಈ ವಿನೂತನ ಕೋರ್ಸಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಹಲವಾರು ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ಸುಸಂಪನ್ನಗೊಂಡಿತು. ಸೃಷ್ಟಿ 2023ರ ವೀರಾಗೃಣಿಯಾಗಿ ಹೊನ್ನಾವರದ ಎಸ್.ಡಿ.ಎಂ ಕಾಲೇಜು ಹಾಗೂ ರನ್ನರ್ಸ ಅಪ್ ಸ್ಥಾನವನ್ನು ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿ.ಕಾಂ ವಿಭಾಗ ಪಡೆದುಕೊಂಡಿತು.
No comments:
Post a Comment