ಭಟ್ಕಳ: 2024 ನೇ ಸಾಲಿನ ರಾಷ್ಟ್ರಮಟ್ಟದ ಕಂಪನಿ ಸೆಕ್ರೇಟರಿ CS-CSEET ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಆಶಿತಾ ಎ ಮೊಗೇರ್, ಅಮೃತಾ ಜಿ ಪೈ (ಬಿ.ಕಾಂ-1 ಸೆಮ್), ರಕ್ಷಾ ಎಸ್ ನಾಯ್ಕ (ಬಿ.ಕಾಂ-2 ಸೆಮ್), ನಾಗಶ್ರೀ ಪಿ ಹರಿದಾಸ್ (ಬಿ.ಕಾಂ-4 ಸೆಮ್) ತೇರ್ಗಡೆ ಹೊಂದುವ ಮೂಲಕ ಸಿ.ಎಸ್ ಎಕ್ಸಿಕ್ಯುಟಿವ್ ಹಂತಕ್ಕೆ ಅರ್ಹತೆ ಪಡೆದಿದ್ದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ತನ್ಮೂಲಕ CS ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗಗನಕುಸುಮವಲ್ಲ ಎಂದು ಸಾಬೀತುಪಡಿಸುವುದರೊಂದಿಗೆ, CS ಆಕಾಂಕ್ಷಿಗಳಿಗೆ ಭವಿಷತ್ತಿನಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜು ಹೊಸ ಆಶಾಕಿರಣವನ್ನು ಮೂಡಿಸಿದೆ.
ಉಡುಪಿಯ ವೀ-ರೀಚ್ ಅಕಾಡೆಮಿಯ ಸಹಯೋಗದೊಂದಿಗೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ CA, CS ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ಕಳೆದ ಹಲವಾರು ವರ್ಷಗಳಿಂದ ನೀಡಲಾಗುತ್ತಿದ್ದು, CS-CSEET ಪರೀಕ್ಷೆಗೂ ಸಹ ವಿಶೇಷ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳ ಈ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್'ನ ಛೇರಮನ್ ಡಾ. ಸುರೇಶ ನಾಯಕ, ಮ್ಯಾನೇಜಿಂಗ್ ಟ್ರಸ್ಟೀ ರವೀಂದ್ರ ಕೊಲ್ಲೆ, ಟ್ರಸ್ಟೀ ಮ್ಯಾನೇಜರ್ ರಾಜೇಶ ನಾಯಕ, ಇತರ ಪದಾಧಿಕಾರಿಗಳು, ವೀ-ರೀಚ್ ಅಕಾಡೆಮಿಯ ಮುಖ್ಯಸ್ಥರು, ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿರುತ್ತಾರೆ. ಸಿ.ಎ-ಸಿ.ಎಸ್-ಸಿ.ಎಂ.ಎ ತರಬೇತಿಯ ಸಂಯೋಜಕರಾದ ಫಣಿಯಪ್ಪಯ್ಯ ಹೆಬ್ಬಾರ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
No comments:
Post a Comment