ಮುಖ್ಯ ತರಬೇತುದಾರರಾದ ವಿವೇಕ ಪಟ್ಕಿ ಮಾತನಾಡಿ "ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಪ್ರತಿಯೊಂದು ಚಟುವಟಿಕೆಗಳನ್ನು ಅವಕಾಶವಾಗಿ ಸ್ವೀಕರಿಸಬೇಕು, ಆಗಲೇ ಯಶಸ್ಸು ಗಳಿಸಲು ಸಾಧ್ಯ" ಎಂದು ಕಿವಿಮಾತು ಹೇಳಿದರು. ಮತ್ತೋರ್ವ ತರಬೇತಿದಾರರಾದ ರಾಜೀವ ಕುಮಾರ ಮಾತನಾಡಿ "ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಅಷ್ಟೇ ಶೃದ್ಧೆಯಿಂದ ಪಾಲ್ಗೊಳ್ಳಬೇಕು, ಅದು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ" ಎಂದು ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟ'ನ ಅಧ್ಯಕ್ಷ ಡಾ. ಸುರೇಶ ನಾಯಕ್ "ವಿದ್ಯಾರ್ಥಿಗಳು ಪದವಿಯ ಮೂರು ವರ್ಷಗಳನ್ನು ಸೂಕ್ತವಾಗಿ ಉಪಯೋಗಿಸಿ, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ ಮಾತನಾಡಿ "ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಂವಹನ ಕೌಶಲ್ಯ ಪ್ರಮುಖವಾದುದು, ಕಾರಣ ಸಂವಹನ ಕೌಶಲ್ಯನ್ನು ವೃದ್ಧಿಸಿಕೊಳ್ಳಲು ಹೆಚ್ಚು ಗಮನಹರಿಸಬೇಕು" ಎಂದು ಹೇಳಿದರು.
ಪ್ರಾಂಶುಪಾಲರಾದ ಶ್ರೀನಾಥ ಪೈ ಪ್ರಾಸ್ತಾವಿಕವಾಗಿ ಮಾತನಾಡಿ ತರಬೇತಿ ಕಾರ್ಯಾಗಾರದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊAಡರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ವಿಭಾಗದ ಉಪಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
No comments:
Post a Comment