ಭಟ್ಕಳ: ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಸೇವಾ ಯೋಜನೆಯು ದೇಶಾದ್ಯಂತ ಕಾಲೇಜುಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ 'ಸ್ವಚ್ಛ ತಾ ಹೀ ಸೇವಾ' ಎಂಬ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿತ್ತು ಅದರಂತೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಎನ್.ಎಸ್.ಎಸ್ ಘಟಕವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, 2 ಅಕ್ಟೋಬರ್ ದಂದು ಭಟ್ಕಳದ ಮುಂಡಳ್ಳಿ ಗ್ರಾಮದ ನೆಸ್ತಾರ ಕಡಲ ತೀರದಲ್ಲಿ ಪ್ಲಾಸ್ಟಿಕ್ ಮುಕ್ತ ಬೀಚ್ ಅಭಿಯಾನವನ್ನು ಹಮ್ಮಿ ಕೊಂಡಿತು.
ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಉನ್ನತ ಭಾರತ ಅಭಿಯಾನ, ಯುತ್ ರೆಡ್ ಕ್ರಾಸ್ ಘಟಕ, ರೊಟರಾಕ್ಟ ಘಟಕದ ಸ್ವಯಂಸೇವಕರ ಸಹಕಾರದೊಂದಿಗೆ ಸಮುದ್ರ ತೀರವನ್ನು ಸ್ವಚ್ಛ ಗೊಳಿಸಲಾಯಿತು.
"ಗಾಂಧಿ ಇನ್ ಮಿ" ಎಂಬ ಡಿಜಿಟಲ್ ಪ್ರತಿಜ್ಞೆಯನ್ನು ಪಡೆಯುವ ಮಾಹಿತಿಯನ್ನು ಸರ್ವರಿಗೂ ನೀಡಲಾಯಿತು. ಸ್ವಯಂಸೇವಕರು, ಕಾರ್ಯಕ್ರಮ ಅಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment